ಸಮೀಪದ ಚಾಂದಶಿರವಾಡ ಗ್ರಾಮದಲ್ಲಿಯ ಬೀರೂಬಾಯಿ ಮಂದಿರದ ಹತ್ತಿರವಿದ್ದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಶಿಕ್ಷಕುಯರನ್ನು ನೇಮಕ ಮಾಡಬೇಕೆಂದು ಗ್ರಾಮಸ್ಥರ ಆಗ್ರಹವಾಗಿದೆ.
ಕಳೆದ 16 ತಿಂಗಳಿಂದ ಈ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಿಲ್ಲ. ಇದರಿಂದ ಮಕ್ಕಳಿಗೆ ತುಂಬಾ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ. ಒಟ್ಟು ಗ್ರಾಮದಲ್ಲಿ 3 ಅಂಗನವಾಡಿ ಕೇಂದ್ರಗಳಿದ್ದು ಇವುಗಳಲ್ಲಿ ಒಂದು ಅಂಗನವಾಡಿ ಕೇಂದ್ರದ ಶಿಕ್ಷಕಿ ರಾಜೀನಾಮೆ ನೀಡಿರುತ್ತಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಬೀರದೇವ ಮಂದಿರದ ಹತ್ತಿರ ಅಂಗನವಾಡಿ ಕೇಂದ್ರದಲ್ಲಿ 30 ಮಕ್ಕಳು ಕಲಿಯುತ್ತಿದ್ದು, ಈ ಕುರಿತು ಮೂರ್ನಾಲ್ಕು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಶೀಘ್ರವೇ ನೇಮಕ ಮಾಡದೇ ಹೋದಲ್ಲಿ ಶಿರವಾಡ ಗ್ರಾಮದ ರಸ್ತೆ ತಡೆ ಮಾಡುವದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
